ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಟ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರ ಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ಈ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ. ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ, ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ , ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.