ಬೆಳ್ತಂಗಡಿ: ವ್ಯಕ್ತಿಯೊಬ್ಬರು ಅಲ್ಪ ಕಾಲದ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಲಾಯಿಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಎಂಬವರ ಪುತ್ರ ಸಂದೀಪ್ ಕುಲಾಲ್ (28) ಎಂಬವರು ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಅದರೆ ಕಳೆದ ಎರಡು ದಿನಗಳಿಂದ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಶೀಲ ವ್ಯಕ್ತಿಯಾಗಿದ್ದರು. ಅಲ್ಲದೇ ಎಲ್ಲರಲ್ಲೂ ಆತ್ಮೀಯತೆಯಿಂದ ಇರುತಿದ್ದರು.ಮೃತ ಸಂದೀಪ್ ಅವರಿಗೆ 5 ತಿಂಗಳ ಹಸುಗೂಸು ಇದ್ದು, ತಂದೆ, ತಾಯಿ , ಅಣ್ಣ , ಪತ್ನಿ , ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.