ಬೆಳ್ತಂಗಡಿ:ತಾಲೂಕಿನಾಧ್ಯಂತ ಬುಧವಾರ ಭಾರೀ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ,ನೇತ್ರಾವತಿ ನದಿ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿ ತಗ್ಗು ಪ್ರದೇಶಗಳ ಕೃಷಿ ಭೂಮಿಗೆ ನೀರು ನುಗ್ಗಿದೆ.ಬುಧವಾರ ಶಿಶಿಲದ ಶಿಶಿಲೇಶ್ವರ ದೇವಸ್ಥಾಕ್ಕೆ ನೀರು ನುಗ್ಗಿ ಜಲಾವೃತ್ತಗೊಂಡಿದೆ. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆ ಎಂಬ ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ
ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಜೂನ್ 26 ಗುರುವಾರ ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.