ಬೆಳ್ತಂಗಡಿ: ಆಳದಂಗಡಿಯ ಫಲ್ಗುಣಿ ನದಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ.ಅಳದಂಗಡಿಯ ಪಲ್ಗುಣಿ ನದಿಯ ಸೇತುವೆ ಬಳಿಯ ಕಿಂಡಿ ಅಣೆಕಟ್ಟು ಬಳಿ ವ್ಯಕ್ತಿಯೊಬ್ಬರು ಮೀನು ಹಿಡಿಯಲೆಂದು ನದಿ ಬದಿಗೆ ತೆರಳಿದ ವೇಳೆ ಹೆಣವೊಂದು ಸಿಲುಕಿಕೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಅವರು ವೇಣೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತ ಯುವಕ ದೇವರಗುಡ್ಡೆ ನಿವಾಸಿ ಸುದೀಪ್(25) ಎಂದು ಗುರುತಿಸಲಾಗಿದೆ.
ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.