ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ನಿರೀಕ್ಷಣಾ ಮಂದಿರಕ್ಕೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್ ನೇರವಾಗಿ ಎಸ್.ಐ.ಟಿ ಇತರ ಅಧಿಕಾರಿಗಳಿದ್ದ ಮಂಗಳೂರು ಐಬಿಗೆ ತೆರಳಿದ್ದು . ಅಲ್ಲಿ ಇತರ ಎಸ್.ಐ.ಟಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಪ್ರಕರಣದ ದಾಖಲೆಗಳನ್ನು ಪರಿಶೀಲನೆ ನಡೆಸಿ ಅದರ ಬಗ್ಗೆ ಚರ್ಚಿಸಿದ ಬಳಿಕ ಅಧಿಕಾರಿಗಳು ತನಿಖೆಗೆ ಇಳಿಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.