ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಾಳ ತಿರುವು ಬಳಿ ಆ.6 ರ ಸಂಜೆ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದ ಪ್ರಕರಣ ಹಾಗೂ ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023
(U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.