ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್.ಐ.ಟಿ ಅಧಿಕಾರಿಗಳು ಬಯಲು ಮಾಡಿದ್ದು. ಇದೊಂದು ಸುಳ್ಳು ಪ್ರಕರಣ ಎಂದು ಸುಜಾತ ಭಟ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಅದಲ್ಲದೆ ಅನನ್ಯ ಭಟ್ ಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಸುಜಾತ ಭಟ್ ಅವರನ್ನು ಎಸ್.ಐ.ಟಿ ಅಧಿಕಾರಿಗಳು ಯಾವುದೇ ಕ್ಷಣದಲ್ಲೂ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.