ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.
ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ.