ಧರ್ಮಸ್ಥಳ ಬುರುಡೆ ಪ್ರಕರಣ, ಹಣ ವರ್ಗಾವಣೆ : ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟೀಸ್:

 

 

 

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಹಾಗೂ ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದ್ದು,
ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಉಳಿದ ಐದು ಮಂದಿಯ ವಿಚಾರಣೆ ಮಾಡಲು ಬಾಕಿ ಇದೆ ಎಂದು ತಿಳಿದು ಬಂದಿದೆ.

error: Content is protected !!