ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಖಚಿತ ಮಾಹಿತಿ    ಅರಣ್ಯ ಸಂಚಾರಿ ದಳದಿಂದ ದಾಳಿ:

 

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪುನರಡ್ಕ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹಲಸು ಮತ್ತು ಸಾಗುವಾನಿ ಮರಗಳನ್ನು ಕಡಿದು 14 ದಿಮ್ಮಿ ಮತ್ತು ಕಟ್ಟಿಗೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಂಚಾರಿ ಅರಣ್ಯ ದಳದ ಅಧಿಕಾರಿಗಳು ನ.21 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗುರ್ಬೊಟ್ಟು ನಿವಾಸಿ ದೂಜ ಎಂಬವರ ಮಗ ಪ್ರವೀಣ್ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ.

ಮಂಗಳೂರು ಸಂಚಾರಿ ಅರಣ್ಯ ದಳದ ವಲಯ ಅರಣ್ಯ ಅಧಿಕಾರಿ  ಸಂತೋಷ್, ಉಪ ವಲಯ ಅರಣ್ಯ ಅಧಿಕಾರಿ  ಪ್ರಶಾಂತ್,ಉಪ ವಲಯ ಅರಣ್ಯ ಅಧಿಕಾರಿ  ಶಿವಾನಂದ ಸದೇಪ ಮಾದರ,ಉಪ ವಲಯ ಅರಣ್ಯ ಅಧಿಕಾರಿ  ಸೋಮನಾಥ್,ವಾಹನ ಚಾಲಕ
ಜಯಪ್ರಕಾಶ್ ಕೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

error: Content is protected !!