ಬಳೆಂಜ ಶಾಲಾ ಕ್ರೀಡಾಂಗಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ: ರಂಗಮಂದಿರ ನಿರ್ಮಾಣ ₹ 5 ಲಕ್ಷ ಅನುದಾನ ಶಾಸಕ ಹರೀಶ್ ಪೂಂಜ ಭರವಸೆ:

 

 

ಬೆಳ್ತಂಗಡಿ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಣ ಟ್ರಸ್ಟ್ , ಅಮೃತ ಮಹೋತ್ಸವ ಸಮಿತಿ ಬಳಂಜ ನೇತೃತ್ವದಲ್ಲಿ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಗ್ರಾಮ ಪಂಚಾಯತ್ ಬಳಂಜ, ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತಾಜಿ ನಗರ ಬಳಂಜ ಇವರ ಸಹಕಾರದೊಂದಿಗೆ ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಬಯಲು ರಂಗ ಮಂದಿರ ನಿರ್ಮಾಣ ಮತ್ತು ಎಲ್.ಕೆ.ಜಿ., ಯು.ಕೆ.ಜಿ. ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ಬಳಂಜ ಶಾಲಾ ವಠಾರದಲ್ಲಿ ನಡೆಯಿತು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಊರಿನ ಶಾಲೆ ಮತ್ತು ದೇವಸ್ಥಾನ ಜೀರ್ಣೋದ್ಧಾರಗೊಂಡು ಅಭಿವೃದ್ಧಿಯಾದಾಗ ಆ ಊರು ಸುಭಿಕ್ಷೆಯಾಗುತ್ತದೆ ಎಂಬ ನಂಬಿಕೆ ನಮ್ಮದು. ಹಾಗಾಗಿ ಬಳಂಜ‌ ಶಾಲೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯದಾನ ನೀಡಿದ ಪುಣ್ಯಕ್ಷೇತ್ರವಿದು. ಈ ಶಾಲೆಯ ಹಲವು ಕಾಮಗಾರಿಗಳಿಗೆ ಅನುದಾನ ನೀಡಿದ್ದೇನೆ. ಹೆಚ್ಚುವರಿಯಾಗಿ ರಂಗಮಂದಿರದ ಪ್ರಗತಿಯ ಕೆಲಸಕ್ಕೆ ರೂ 5ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ,ಬಳಂಜ‌ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಶ್ರೀ.ಕ್ಷೇ.ಧ.ಗ್ರಾ.ಯೋಜನೆಯೋಜನಾಧಿಕಾರಿ ಅಶೋಕ್,ಅಳದಂಗಡಿ ಸೊಸೈಟಿ ಅಧ್ಯಕ್ಷ,ಶಿಕ್ಷಣ ಟ್ರಸ್ಟ್‌ ಸದಸ್ಯ ರಾಕೇಶ್ ಹೆಗ್ಡೆ,ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತಾಜಿ ನಗರ ಇದರ ಮಾಜಿ ಅಧ್ಯಕ್ಷ ಜಗದೀಶ್ ರೈ ಹಾನಿಂಜ,ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ರತ್ನರಾಜ್ ಜೈನ್,ಶಿಕ್ಷಣ ಟ್ರಸ್ಟ್ ಸದಸ್ಯರಾದ ಸಂತೋಷ್ ಕುಮಾರ್ ಕಾಪಿನಡ್ಕ,ಪ್ರಮೋದ್ ಕುಮಾರ್ ಜೈನ್,ಬಳಂಜ ಶಾಲಾ ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ,ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ,ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಕುಮಾರ್ ಹಾನಿಂಜ,ಬಳಂಜ ಗ್ರಾ.ಪಂ ಸದಸ್ಯರಾದ ರವೀಂದ್ರ ಬಿ ಅಮೀನ್,ಯಕ್ಷಿತಾ ದೇವಾಡಿಗ,ಯೋಜನೆಯ ಕೃಷಿ ವಿಭಾಗದ ಯೋಜನಾಧಿಕಾರಿ ಸಂತೋಷ್ ಹಾಕೋಟೆ, ಪ್ರಮುಖರಾದ ಗಣೇಶ್ ದೇವಾಡಿಗ ಸಂಭ್ರಮ,ಯತೀಶ್ ಕಪ್ರಾಜೆ ಸಿದ್ದವನ,ಯತೀಶ್ ದೇವಾಡಿಗ,ನಿತ್ಯಾನಂದ ಹೆಗ್ಡೆ,ಅಶೋಕ್ ತೋಟದಪಲ್ಕೆ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ,ಪತ್ರಕರ್ತ ಸಂತೋಷ್ ಕೋಟ್ಯಾನ್, ಶಿವಾಜಿ ಪ್ರೆಂಡ್ಸ್ ಕ್ಲಬ್ ನ ಸದಸ್ಯರಾದ ರಾಘವೇಂದ್ರ ಭಟ್, ಮಾದವ ದೇವಾಡಿಗ, ಡೀಕಯ್ಯ ಕುಲಾಲ್, ಯೋಗೀಶ್ ಕುಲಾಲ್, ವಿಶ್ವನಾಥ ಕುಲಾಲ್, ಪ್ರಕಾಶ್ ದೇವಾಡಿಗ, ಧಗ್ರಾ ಯೋಜನೆಯ ಮೇಲ್ವಿಚಾರಕಿ ಪದ್ಮಾವತಿ, ಸೇವಾ ಪ್ರತಿನಿದಿಗಳಾದಾ ಉಮಾವತಿ, ಪ್ರಮಿಳಾ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಯೋಜನೆಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ಕಿರಣ್ ಕುಮಾರ್ ಸ್ವಾಗತಿಸಿದರು. ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ ಸುಲೋಚನಾ ವಂದಿಸಿದರು.

error: Content is protected !!