ಡಿ7 ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ- ಚೆನ್ನಯ ಕ್ರೀಡಾಕೂಟ:

 

 

ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ 12ನೇ ವರ್ಷದ ಕೋಟಿ-ಚೆನ್ನಯ
ಕ್ರೀಡಾಕೂಟ ಡಿ.7ರಂದು ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ ಜರಗಲಿದೆ ಎಂದು ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಹೇಳಿದರು.
ಅವರು ಡಿ. 1 ರಂದು ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
‍ಬೆಳಿಗ್ಗೆ 7ಗಂಟೆಗೆ ಸಂಘದಲ್ಲಿ ಗುರುಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
8ಗಂಟೆಗೆ ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಲಿದ್ದಾರೆ
ಬಳಿಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಚಿದಾನಂದ ಎಲ್ದಕ್ಕ ವಾಹನ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಕ್ರೀಡಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಧ್ವಜಾರೋಹಣ ನಡೆಸಲಿದ್ದಾರೆ
10ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ನಡೆಸುವರು.
ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ, ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜಿ. ಸುವರ್ಣ ಸೇರಿದಂತೆ ಇತರ ಗಣ್ಯರು ಭಾಗವಹಿಸುವರು.
ಮಧ್ಯಾಹ್ನ
2ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಜರುಗಲಿದ್ದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್,ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಧಕ್ಷಯ ಸತ್ಯಜಿತ್ ಸುರತ್ಕಲ್ ಭಾಗವಹಿಸುವರು.
ಸಂಜೆ 6ಗಂಟೆಗ ಸಮಾರೋಪ ಸಮಾರಂಭ ನಡೆಯಲಿದ್ದು ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ  ಅಧ್ಯಕ್ಷ ಜೈರಾಜ್ ಎಚ್. ಸೋಮ ಸುಂದರಂ, ಕೋಶಾಧಿಕಾರಿ  ಪದ್ಮರಾಜ್ ಆರ್, ಗುರುದೇವ ಕಾಲೇಜ್ ಅಧ್ಯಕ್ಷೆ
ಪ್ರೀತಿತ ಧರ್ಮ ವಿಜೇತ್ ಹಾಗೂ ಇತರರು ಭಾಗವಹಿಸುವರು.

ಬೆಳಿಗ್ಗೆ 10ಗಂಟೆಗೆ ಬಿಲ್ಲವ ಮಹಿಳಾ ವೇದಿಕೆ ವತಿಯಿಂದ ವಧು ವರರ ಅನ್ವೇಷಣೆ ಜರುಗಲಿದೆ.
ಡಿ. 3 ರಂದು ಮಂಗಳೂರು ಮಂಗಳ ಗಂಗೋತ್ರಿ ವಿಶ್ವವಿದ್ಯಾ ನಿಲಯ ಕ್ಯಾಂಪಸ್ ನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ, ಜತೆ ಕಾರ್ಯದರ್ಶಿ ಸಂತೋಷ ಉಪ್ಪಾರು, ಕ್ರೀಡಾ ನಿರ್ದೇಶಕ ತರುಷ್ ಜೆ. ಹೇರಾಜೆ, ಕ್ರೀಡಾ ಕಾರ್ಯದರ್ಶಿ ದೇವಿ ಪ್ರಸಾದ್ ಬರಮೇಲು, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್, ಸಂಘದ ನಿರ್ದೇಶಕರಾದ ರೂಪೇಶ್ ಧರ್ಮಸ್ಥಳ, ಚಂದ್ರಶೇಖರ್ ಇಂದಬೆಟ್ಟು, ಸುನೀಲ್ ಕನ್ಯಾಡಿ ಉಪಸ್ಥಿತರಿದ್ದರು.

error: Content is protected !!