ಚಾರ್ಮಾಡಿ, ಕಾರು ಡಿಕ್ಕಿ: 3 ವರ್ಷದ ಬಾಲಕ ಸಾವು:

 

 

 

ಬೆಳ್ತಂಗಡಿ: ಅಂಗಡಿಯಿಂದ ಅಜ್ಜ ತೆಗೆದುಕೊಟ್ಟ ತಿಂಡಿ ತಗೊಂಡು ರಸ್ತೆ ಬದಿ ನಿಂತಿದ್ದ  ವೇಳೆ ಕಾರು ಡಿಕ್ಕಿ ಹೊಡೆದು ಬಾಲಕನೊಬ್ಬ  ಸಾವನ್ನಪ್ಪಿದ ದಾರುಣ ಘಟನೆ ಡಿ.3 ರಂದು  ಚಾರ್ಮಾಡಿಯಲ್ಲಿ ಸಂಭವಿಸಿದೆ.
ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮೂರು ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತ ಪಟ್ಟ ಬಾಲಕನಾಗಿದ್ದಾನೆ. ತನ್ನ  ಮನೆಯ ಎದುರಿಗೆ ಇರುವ ಅಂಗಡಿಯಿಂದ ಅಜ್ಜ ತೆಗೆದುಕೊಟ್ಟ ತಿಂಡಿ ಪಡೆದು ರಸ್ತೆ ಬದಿ ನಿಂತಿದ್ದ ವೇಳೆ ಮೂಡಿಗೆರೆ ಕಡೆಯಿಂದ ಬಂದ ಕಾರು ಮಗುವಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಬಾಲಕನನ್ನು ತಕ್ಷಣ ಸ್ಥಳೀಯ ಕಕ್ಕಿಂಜೆ ಆಸತ್ರೆಗೆ ಕರೆತಂದಾಗ ಅಲ್ಲಿ ವೈದ್ಯರು ಪರಿಕ್ಷೀಸಿ ಮೃತ ಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುತಿದ್ದಾರೆ.

error: Content is protected !!