
ಬೆಳ್ತಂಗಡಿ : ಬೈಕ್ ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು . ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಯಿಲ ಗ್ರಾಮದಲ್ಲಿ ಡಿ 26 ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯ ಮಗ ಸುಕೇಶ್(31) ಎಂಬವರು ಬೆಳ್ತಂಗಡಿ ಬೈಕ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದು. ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8:45 ಕ್ಕೆ ಮನೆ ಗೆ ಹೋಗುತಿದ್ದ ವೇಳೆ ಲಾಯಿಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.
ಈ ವೇಳೆ ಬೈಕ್ ಸವಾರ ಸುಕೇಶ್ ಕಾಲು ಮತ್ತು ಕೈಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು. ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್ ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.27 ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.