
ಬೆಳ್ತಂಗಡಿ: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ಸ್ಥಳದಲ್ಲೇ ಸಾವನ್ಮಪ್ಪಿದ ಘಟನೆ ಗುಂಡ್ಯ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.ಸಕಲೇಶಪುರದಲ್ಲಿ ನಡೆದ
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತಿದ್ದ ಬೆಳ್ತಂಗಡಿಯ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆಯ ಶ್ರೀಧರ್, ಹಾಗೂ ಜನಾರ್ಧನ ಎಂಬವರು ಪಯಾಣಿಸುತಿದ್ದ ಕಾರಿಗೆ ತಿರುಪತಿ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.