
ಬೆಳ್ತಂಗಡಿ : ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಫೆ17 ರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು ಶಬರಿಮಲೆಗೆ ರೈಲಿನಲ್ಲಿ ಮಂಗಳೂರಿನಿಂದ ಹೊರಟಿದ್ದು, ಹೋಗುವ ವೇಳೆ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೇರಳದ ತ್ರಿಶೂರ್ ಆಸ್ಪತ್ರೆಯಲ್ಲಿ ಏ.18 ರಂದು ಮೃತಪಟ್ಟಿದ್ದಾರೆ.