ಎಸ್. ಎಸ್. ಎಲ್ .ಸಿ, ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿನಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ :

 

 

 

ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿನಿಯನ್ನು ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಗಳಿಸಿದ್ದು ಇವರ ಈ ಸಾಧನೆಯನ್ನು ಗುರುತಿಸಿ ಟ್ರಸ್ಟ್ ನ ವತಿಯಿಂದ ಸನ್ಮಾನಿಸಿ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ,ರಾಷ್ಟ್ರ ಮಟ್ಟದಲ್ಲಿ ಸಾಧನೆಗೈಯುವಂತಾಗಲಿ ಎಂದು ಶುಭ ಹಾರೈಸಲಾಯಿತು.
ಈ ಸಂಧರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ ರಂಜನ್ ಜಿ ಗೌಡ, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಉಪಾಧ್ಯಕ್ಷ ವಸಂತ ಗೌಡ ಮರಕಡ, ಕಾರ್ಯದರ್ಶಿ ಭರತ್ ಕುಮಾರ್, ಸ್ಥಾಪಕ ಟ್ರಸ್ಟಿ ನವೀನ್ ಬಿ ಕೆ, ಟ್ರಸ್ಟಿ ದಿನೇಶ್ ಕೊಲೆಂಜಿರೋಡಿ ಮತ್ತು ಮನೆಯವರು ಉಪಸ್ಥಿತರಿದ್ದರು.

error: Content is protected !!