ಗುರುವಾಯನಕೆರೆ ಸಂಶಯಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಅನುಮಾನಾಸ್ಪದ ಸಾವು, ಸಮಗ್ರ ತನಿಖೆಗೆ ಎಸ್ ಡಿ.ಪಿ.ಐ ಆಗ್ರಹ:

 

 

ಬೆಳ್ತಂಗಡಿ :  ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಟ್ಟಡದ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಮೃತ ದೇಹ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಮಾಹಿತಿ ತಿಳಿದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಅನುಮಾನ ರೀತಿಯಲ್ಲಿ ಮೃತ ಪಟ್ಟಿರುವ ರೀತಿಯಲ್ಲಿ ಕಾಣುತ್ತಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಧಿಕಾರಿ ಡಾ.ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ‌.ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ, ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅನುಮಾನಾಸ್ಪದ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ಎಸ್‌ಡಿಪಿಐ ಆಗ್ರಹ

ಕುವೆಟ್ಟು ಗ್ರಾಮದ ಗುರುವಾಯನಕೆರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಇಂದು ಬೆಳಿಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ (32) ಎಂಬ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಅತ್ಯಂತ ಆತಂಕಕಾರಿ ಹಾಗೂ ಗಂಭೀರ ವಿಚಾರವಾಗಿದೆ.

ಸಾವನ್ನಪ್ಪಿದ ಯತೀಶ್ ಅವರ ದೇಹದ ಮೇಲೆ ಹಲ್ಲೆ ನಡೆಸಿರುವುದನ್ನು ಸೂಚಿಸುವ ಗಾಯಗಳ ಗುರುತುಗಳು ಕಂಡುಬಂದಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸಹಜ ಸಾವು ಅಲ್ಲದೇ ಇತರೆ ಆಯಾಮಗಳನ್ನು ಹೊಂದಿರುವ ಸಾಧ್ಯತೆಯಿದ್ದು, ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು.

ಸಾವಿನ ಹಿಂದಿರುವ ನೈಜ ಕಾರಣವನ್ನು ಪತ್ತೆಹಚ್ಚಿ, ಯಾವುದೇ ದುಷ್ಕೃತ್ಯ ಅಥವಾ ಸಂಚು ನಡೆದಿದ್ದಲ್ಲಿ ಅದರಲ್ಲಿ ಭಾಗಿಯಾಗಿರುವವರನ್ನು ಕಾನೂನಿನ ಮುಂದೆ ತಂದು ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಆಗ್ರಹಿಸಿದ್ದಾರೆ.

error: Content is protected !!