
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಸೈಮನ್ ಅವರು ಪ್ರಯಾಣಿಸುತ್ತಿದ್ದ ಕಾರು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪಲ್ಟಿಯಾಗಿದೆ.
ಕಾರಿನಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ಸೇರಿದಂತೆ ಇನ್ಸ್ಪೆಕ್ಟರ್ ಕುಸುಮಾಧರ್ ಇದ್ದರು. ಚಾರ್ಮಾಡಿ ಬಳಿ ಸಂಚಾರದಲ್ಲಿದ್ದಾಗಲೇ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಸಣ್ಣಪುಟ್ಟ ಗಾಯಗಳಿಂದ ಸೈಮನ್ ಸೇರಿದಂತೆ ಕಾರಿನಲ್ಲಿದ್ದವರು ಪಾರಾಗಿದ್ದಾರೆ