ಭಾರಿ ಮಳೆ: ಜು.2 ನಾಳೆ ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ, ರೆಡ್ ಅಲರ್ಟ್ ಘೋಷಣೆ:

 

 

 

 

ಬೆಳ್ತಂಗಡಿ:: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ಬಿರುಸುಗೊಂಡಿದ್ಪು , ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ಸತತ ಎರಡು ದಿನಗಳ ಕಾಲ  ರೆಡ್ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜುಲೈ 2ರ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ತುರ್ತು ಆದೇಶ ಹೊರಡಿಸಿದ್ದಾರೆ.

12ನೇ ತರಗತಿವರೆಗೆ ಶೈಕ್ಷಣಿಕ ಸಂಸ್ಥೆಗಳು ಬಂದ್: ಮಳೆಯ ತೀವ್ರತೆ ಹಾಗೂ ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪಿಯು ಕಾಲೇಜುಗಳು ಸೇರಿದಂತೆ (12ನೇ ತರಗತಿಯವರೆಗೆ) ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಜುಲೈ 2ರಂದು ರಜೆ ಘೋಷಿಸಿದ್ದಾರೆ.

error: Content is protected !!