ಬಳಂಜ- ಸುದೆಗುಂಡಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ :

 

 

 

ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜ ಜು. 12ರಂದು ಶಿಲಾನ್ಯಾಸ ನೆರವೇರಿಸಿದರು.

ರೂ 1 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದರು.

ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ, ಯುವರಾಜ್ ಜೈನ್,ಗಣೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಗ್ನೀವೀರ್ ಯೋಜನೆಯಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ರಂಜಿತ ಸಹೋದರರ ಹೆತ್ತವರನ್ನು ಗೌರವಿಸಲಾಯಿತು.

error: Content is protected !!