
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮಧ್ಯರಾತ್ರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ಚಿರತೆ ತಿರುಗಾಡುತಿದ್ದು. ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.