ಬೆಳ್ತಂಗಡಿ ತಾಲೂಕು ಕಛೇರಿಗೆ ಲೋಕಾಯುಕ್ತ ದಾಳಿ, ಪರಿಶೀಲನೆ:

 

 

 

ಬೆಳ್ತಂಗಡಿ: ತಾಲೂಕು ಕಚೇರಿಯ ಕಂದಾಯ ಇಲಾಖೆಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಗಸ್ಟ್ 12ರಂದು ಬೆಳಗ್ಗೆ 11:30ಕ್ಕೆ ಈ ಕಾರ್ಯಾಚರಣೆ ನಡೆದಿದೆ ಎಂದು ವರದಿ ಹೇಳುತ್ತದೆ.

ಡಿವೈಎಸ್ಪಿ ಸುರೇಶ್ ಅವರ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ಲೋಕಾಯುಕ್ತ ತಂಡ ಕಚೇರಿಯಲ್ಲಿ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ವಿವಿಧ ಇಲಾಖೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ದಾಳಿಯ ವೇಳೆ ಏನು ಪತ್ತೆಯಾಗಿದೆ ಅಥವಾ ಯಾರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಬೇಕಿದೆ.

error: Content is protected !!