ವೃತ್ತಿ ಕ್ಷೇತ್ರದ ಯಶಸ್ಸಿಗೆ ಪರಿಪೂರ್ಣ ಪರಿಶ್ರಮವೇ ಕೀಲಿ ಕೈ”: ಮಹಮ್ಮದ್ ಸಫ್ವಾನ್*

 

 

 

ಉಜಿರೆ: ವೃತ್ತಿ ಕ್ಷೇತ್ರದಲ್ಲಿ ಗೆಲುವನ್ನು ಕಾಣಲು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿಗಳು ಇಂದಿನಿಂದಲೇ ಪರಿಶ್ರಮದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಜೋಸೆಫ್ ಅಂತರಾಷ್ಟ್ರೀಯ ಕಂಪನಿಯ ಪಿ ಆರ್ ಓ ಆಗಿರುವ ಮಹಮ್ಮದ್ ಸಪ್ವಾನ್ ಹೇಳಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಸೆ. 7 ರಂದು ಆಯೋಜಿಸಿದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ವಿದೇಶದಲ್ಲಿರುವ ಉದ್ಯೋಗ ಅವಕಾಶಗಳು ಹಾಗೂ ಪ್ರಸ್ತುತ ಯು.ಎ.ಇ ಅಂತಹ ದೇಶಗಳಲ್ಲಿ ಪತ್ರಿಕೋದ್ಯಮಕ್ಕೆ ಇರುವಂತಹ ಪ್ರಾಮುಖ್ಯತೆಗಳ ಕುರಿತು ಹಾಗೂ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವ ರೀತಿಯಲ್ಲಿ ತಯಾರಿಸಿಕೊಳ್ಳಬೇಕು ಎಂಬುದರ ಕುರಿತಾಗಿ ಅವರು ಹೇಳಿದರು.

ಭಾರತಕ್ಕಿಂತ ಹೊರದೇಶಗಳಲ್ಲಿ ಪತ್ರಿಕೋದ್ಯಮ ಎಷ್ಟು ವಿಭಿನ್ನವಾಗಿ ಮತ್ತು ಸೃಜನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತಾಗಿಯೂ ಪತ್ರಕರ್ತರು ಯಾವ ರೀತಿಯಾಗಿ ವಸ್ತುನಿಷ್ಠತೆಯಿಂದ ಕಾರ್ಯನಿರ್ವಹಿಸುತ್ತಾರೆ ಎಂಬುದಾಗಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಹೆಗ್ಡೆ, ಎಸ್‌ಡಿಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್ ಮೈಸೂರೆ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!