ಕಾರನ್ನು ತಡೆದು ಚಾಲಕನ ಮೇಲೆ ಹಲ್ಲೆ

ಚಾರ್ಮಾಡಿ: ಉಜಿರೆಯಿಂದ ಕೊಟ್ಟಿಗೆಹಾರ ಕಡೆಗೆ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಟ್ಯಾಕ್ಸಿಯನ್ನು ಅಡ್ಡಕಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಚಾರ್ಮಾಡಿ ಸಮೀಪದ ಹಳ್ಳಸೇತುವೆ ಎಂಬಲ್ಲಿ 8 ಮಂದಿಯ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಟ್ಯಾಕ್ಸಿ ಚಾಲಕ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

error: Content is protected !!