ಧರ್ಮಸ್ಥಳದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಧರ್ಮಸ್ಥಳ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ, ಆಶೀರ್ವಾದ ಪಡೆದರು.
ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆಯವರು ಸಿ.ಟಿ.ರವಿ ಅವರನ್ನು ಗೌರವಿಸಿದರು. ಈ ಸಂದರ್ಭ ಹೇಮಾವತಿ ವೀ ಹೆಗ್ಗಡೆ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರಿಗೆ ಕಾಳಜಿ‌ ಫ್ಲಡ್ ರಿಲೀಫ್ ‌ಫಂಡ್ ನಿಂದ ಧನ ಸಹಾಯ ನೀಡಲು ಬೆಳ್ತಂಗಡಿಗೆ ಆಗಮಿಸಿದ ಸಂದರ್ಭ ಧರ್ಮಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಬೆಳ್ತಂಗಡಿ ಶಾಸಕ‌ ಹರೀಶ್ ‌ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಸ್ವಾಗತಿಸಿದರು. ಕ್ಷೇತ್ರದ ಪರವಾಗಿ ದೇವಳದ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.

ಬೆಳ್ತಂಗಡಿ ‌ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಸಿ.ಟಿ.ರವಿ ಅವರ ಆಪ್ತ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮುಗೆರೋಡಿ ಪ್ರವಾಸೋದ್ಯಮ ಇಲಾಖೆ ದ.ಕ. ಸಹಾಯಕ ‌ನಿರ್ದೇಶಕ ಸೋಮಶೇಖರ ಬಿ.ಕೆ., ಕ್ರೀಡಾ ‌ಇಲಾಖೆ ಉಪನಿರ್ದೇಶಕ‌ ಪ್ರದೀಪ್ ‌ಡಿ’ಸೋಜಾ ಉಪಸ್ಥಿತರಿದ್ದರು.

error: Content is protected !!