ಉಜಿರೆ ಗ್ರಾ.ಪಂ. ಮಟ್ಟದ ಕುಟುಂಬ ಮಿಲನ ಉದ್ಘಾಟನೆ: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾಗಿ

ಉಜಿರೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಉಜಿರೆ ಮಹಾಶಕ್ತಿಕೇಂದ್ರ ಹಮ್ಮಿಕೊಂಡಿದ್ದ ಉಜಿರೆ ಗ್ರಾಮಪಂಚಾಯತ್ ಮಟ್ಟದ ಕುಟುಂಬ ಮಿಲನ ಕಾರ್ಯಕ್ರಮವನ್ನು ರಘುನಾಥ ಶೆಣೈ ಅವರು ಉದ್ಘಾಟಿಸಿದರು.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಪ್ರಭಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರನ್ನು ಉಜಿರೆ ಕೇಂದ್ರ ಭಾಗದಿಂದ ಸಭೆ ನಡೆಯುವ ಸ್ಥಳಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು.


ಈ ಸಂದರ್ಭ ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಚೆನ್ನಕೇಶವ, ಉಜಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಬಾಬು ಗೌಡ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತರಾಮ ಬೆಳಾಲು, ಧನಲಕ್ಷ್ಮೀ ಜನಾರ್ಧನ್, ಶಶಿಧರ ಕಲ್ಮಂಜ, ಹರೀಶ್ ಸಾಲ್ಯಾನ್, ಸೌಮ್ಯಲತಾ, ಮಮತಾ ಶೆಟ್ಟಿ, ಕುಶಲಪ್ಪ ಗೌಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಯಶವಂತ ಗೌಡ, ರೈತ ಮೋರ್ಚಾ ಅಧ್ಯಕ್ಷ ಜಯಂತ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

error: Content is protected !!