ವಿ.ಹಿಂ.ಪ., ಭಜರಂಗ ದಳದಿಂದ ಜ.7ರಂದು ಉಜಿರೆಯಲ್ಲಿ ಬೃಹತ್ ಪ್ರತಿಭಟನೆ: ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

 

ಬೆಳ್ತಂಗಡಿ: ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಜ‌ನವರಿ 7ರಂದು ಉಜಿರೆ ಬಸ್ ನಿಲ್ದಾಣ ಬಳಿ‌ ಬೃಹತ್ ಪ್ರತಿಭಟನೆಯನ್ನು ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ವಿವಿಧ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ. ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ ಹೇಳಿದರು. ‌ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ವಿ.ಹಿಂ.ಪ., ಭಜರಂಗ ದಳ ಜಂಟಿಯಾಗಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪ್ರತಿಭಟನೆಯಲ್ಲಿ ವಿ.ಹಿಂ.ಪ. ಪ್ರಧಾನ‌ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹಾಗೂ ಜಿಲ್ಲೆ, ರಾಜ್ಯಮಟ್ಟದ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಘಟನೆಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಲಾಗುವುದು ಎಂದು‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿ.ಹಿಂ.ಪ. ತಾಲೂಕು ಪ್ರಖಂಡ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಆಗರ್ತ, ತಾಲೂಕು ಪ್ರಧಾನ ಕಾರ್ಯದರ್ಶಿ ಮೋಹನ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ನವೀನ್ ನೆರಿಯ ಸ್ವಾಗತಿಸಿ, ವಂದಿಸಿದರು.

error: Content is protected !!