ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ ವರ್ಧಂತ್ಯುತ್ಸವ, ಪಾದಪೂಜೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸದ ಮೂವತ್ತೊಂಬತ್ತನೆ ವರ್ಧಂತ್ಯುತ್ಸವ ಫೆ. 2 ಮತ್ತು 3 ರಂದು ನಡೆಯಲಿದೆ.  ಫೆ. 2 ರಂದು ಮಂಗಳವಾರ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಹಾಗೂ ಸಂಜೆ ಗಂಟೆ 4 ರಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತವೆ.
ಫೆ. 3 ರಂದು ಬುಧವಾರ ಬೆಳಿಗ್ಗೆ ಗಂಟೆ 8 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರಿಂದ ಮಂಗಲ ಪ್ರವಚನ ಕಾರ್ಯಕ್ರಮ ನಡೆಯಲಿದೆ.

error: Content is protected !!