ಗರ್ಡಾಡಿ: ₹2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಡೆಂಜೋಳಿ ದೇವಸ್ಥಾನ ಮುಂಭಾಗದಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು.

ಡೆಂಜೋಳಿ ದೇವಸ್ಥಾನದ ಆಡಳಿತ ಮೊಕ್ತೇಸರರು ಡಿ.ಉದಯ ಮಂಜಿತ್ತಾಯ, ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ ಅರ್ಚಾಯ, ವಿಶ್ವನಾಥ ಹೊಳ್ಳ, ಜಯರಾಮ್ ಶೆಟ್ಟಿ, ಸುಂದರ ಪೂಜಾರಿ, ಶ್ರೀನಿವಾಸ್ ಶೆಟ್ಟಿ, ಗರ್ಡಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಯೋಗಿಶ್ ಭಟ್, ಶುಭ ದಿನಕರ್, ಪ್ರಶಾಂತ್ ಪೂಜಾರಿ, ಹರೀಶ್ ಕೋಟ್ಯಾನ್, ಅಶೋಕ್ ಸಪಲ್ಯ, ಸುಮತಿ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿದರು.

error: Content is protected !!