ದಕ್ಷಿಣ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ತಿಂಗಳ ಫೆ. 12,13 ಹಾಗೂ 14 ರಂದು ಮೂರು ದಿನಗಳ ಕಾಲ ಮಂಗಳೂರಿನ ಕೊಡಿಯಾಲ್ ಬೈಲ್‌ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭ ಹೇಮಾವತಿ ವೀ. ಹೆಗ್ಗಡೆ, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಬೆಳ್ತಂಗಡಿ ತಾಲೂಕು ಕಸಾಪ ಅಧ್ಯಕ್ಷ ಡಾ. ಬಿ. ಯಶೋವರ್ಮ, ಗೌರವ ಕಾರ್ಯದರ್ಶಿ ಡಾ. ಎಂ. ಪಿ. ಶ್ರೀನಾಥ್ ಉಜಿರೆ, ಪೊಳಲಿ ನಿತ್ಯಾನಂದ ಕಾರಂತ್,
ಅಶ್ವತ್ಥಾಮ ಉಪಸ್ಥಿತರಿದ್ದರು.

error: Content is protected !!