ಚಾರ್ಮಾಡಿ ಘಾಟಿಯಲ್ಲಿ ಅನಾಥ ಶವ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಪಕ್ಕದಲ್ಲಿ ಸುಮಾರು ಮೂವತೈದರಿಂದ ನಲ್ವತ್ತು ವರುಷ ಪ್ರಾಯದ ಗಂಡಸಿನ ಅನಾಥ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಮೆಲ್ನೋಟಕ್ಕೆ ಕುಸಿದು ಬಿದ್ದು ಸಾವನ್ನಪ್ಪಿರಬಹುದು ಎಂದು ಸಂಶಯಿಸಲಾಗಿದೆ.

ಶವ ಇರುವ ಬಗ್ಗೆ ಧರ್ಮಸ್ಥಳ ಠಾಣೆಗೆ ಮಾಹಿತಿ ಬಂದಿದ್ದು ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಪವನ್ ನಾಯಕ್ ತಂಡ ಭೇಟಿ ನೀಡಿ ಪರಿಶೀಲಿಸಿದರು. ನಂತರ ಶವವನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಚಾರ್ಮಾಡಿ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕ ಜಲೀಲ್ , ಅಶ್ರಫ್ ಚಾರ್ಮಾಡಿ, ರಫೀಕ್ ಕುಂಟಿನಿ ಶವವನ್ನು ಮೇಲೆತ್ತಲು ಪೊಲೀಸರೊಂದಿಗೆ ಸಹಕರಿಸಿದರು.

error: Content is protected !!