ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಿಂದ ಧರ್ಮಸ್ಥಳ ಭೇಟಿ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ

ಧರ್ಮಸ್ಥಳ: ಕರ್ನಾಟಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನ ಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ,‌ ಕೋಶಾಧಿಕಾರಿ ಸುರೇಶ್ ಶಡಷ್ಯಾಳ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣ ಬಸವಣ ಗೌಡ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲೋಕಣ್ಣ,ಉಡುಪಿ ಜಿಲ್ಲಾಧ್ಯಕ್ಷರ ದಿನಕರ ಶೆಟ್ಟಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಜಿಲ್ಲಾ ಘಟಕದ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ಕೋಶಾಧಿಕಾರಿ ರಾಜೇಶ್ ನೆಲ್ಯಾಡಿ, ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಮೂಡಬಿದಿರೆ ತಾಲೂಕು ಅಧ್ಯಕ್ಷ ನಾಗೇಶ್, ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಸುರೇಶ್ ಮಾಚಾರ್, ಉಪಾಧ್ಯಕ್ಷ ಕಿರಣ್ ಕುಮಾರ್ ಕೆ.ಎಸ್, ಖಜಾಂಚಿ ಲೋಕೇಶ ಜಿ ಮತ್ತು ಸಹಕಾರ್ಯದರ್ಶಿ ಜ್ಯೋತಿ ಎಂ.ಎಸ್. ಹಾಜರಿದ್ದರು.

error: Content is protected !!